ಹಿರಿಯ ನಟ ದ್ವಾರಕೀಶ್ ನಿಧನ

ಹಿರಿಯ ನಟ ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮತ್ತು ನಿರ್ಮಾಪಕ ದ್ವಾರಕೇಶ್ ಅವರು ಹೃದಯಘಾತದಿಂದ ಇಂದು (ಮಂಗಳವಾರ ಏಪ್ರಿಲ್ 16) ರಂದು ಬೆಂಗಳೂರು ನಗರದಲ್ಲಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಕರ್ನಾಟಕದ ಕುಳ್ಳ ಎಂದೇ ಖ್ಯಾತಿಯನ್ನು ಹೊಂದಿದ ಹಿರಿಯ ನಟ ದ್ವಾರಕೇಶ್ ಅವರು ಕನ್ನಡ ಚಿತ್ರರಂಗವನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟನೆ ಮಾಡುವ ಜೊತೆಗೆ ಸಿನಿಮಾ ನಿರ್ಮಾಪಕರಾಗಿಯೂ ಕೂಡ ಕೆಲಸ ಮಾಡಿದ ದ್ವಾರಕೇಶ್ ಅವರು ಇದು ಕನ್ನಡ ಚಿತ್ರರಂಗ ಅಗಲಿದ್ದಾರೆ.

ಹೌದು, ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದುನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ.

ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

Related