ನಟ ಸುದೀಪ್ ಗೆ ಅನಾರೋಗ್ಯ..!

ನಟ ಸುದೀಪ್ ಗೆ ಅನಾರೋಗ್ಯ..!

ನಟ ಕಿಚ್ಚ ಸುದೀಪ್ ಸದ್ಯ ತಮ್ಮ ಮುಂದಿನ ಸಿನಿಮಾದ ಪ್ರಚಾರದ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ವಿಕ್ರಾಂತ್ ರೋಣ ಅಬ್ಬರದ ಪ್ರಚಾರ ಶುರುವಾಗಿದ್ದು, ಕಾರ್ಯಕ್ರಮಗಳಲ್ಲಿ ಸುದೀಪ್ ಭಾಗಿಯಾಗುತ್ತಿದ್ದಾರೆ. ಸಿನಿಮಾ ಇದೇ ತಿಂಗಳು ತೆರೆಗೆ ಬರುತ್ತಿದೆ.

ಕಿಚ್ಚನನ್ನು ದೊಡ್ಡ ಪರದೆಯ ಮೇಲೆ ಶೀಘ್ರದಲ್ಲಿಯೇ ಕಂಡುಕೊಳ್ಳಬಹುದು ಎಂದು ಅಭಿಮಾನಿಗಳು ಖುಷಿಯಲ್ಲಿದ್ದಾರೆ. ಪ್ರಚಾರದ ಕೆಲಸದ ಜೊತೆಗೆ ನಟ ಸುದೀಪ್ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ವಿಚಾರವನ್ನು ಸ್ವತಃ ಸುದೀಪ್ ಬಹಿರಂಗಪಡಿಸಿದ್ದಾರೆ.

ಸದ್ಯಕ್ಕೆ ನಟ ಸುದೀಪ್ ಆರೋಗ್ಯ ಚೆನ್ನಾಗಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಸುದೀಪ್ ಹಲವು ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಹಾಗಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

Related