ನಟಿ ಜಯಪ್ರದಾಗೆ ಮತ್ತೊಂದು ಸಂಕಷ್ಟ

 ನಟಿ ಜಯಪ್ರದಾಗೆ ಮತ್ತೊಂದು ಸಂಕಷ್ಟ

ಮುಂಬೈ: ಬಹುಭಾಷ ಹಿರಿಯ ನಟಿ ಜಯಪ್ರದ ಅವರು ಒಂದಲ್ಲ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಾಗುತ್ತಲೇ ಇರುತ್ತಾರೆ.

ಕಳೆದ ಕೆಲವು ತಿಂಗಳುಗಳ ಹಿಂದೆ ನಟಿ ಜಯಪ್ರದಾ ಅವರು ಥಿಯೇಟರ್ ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಇಎಸ್ಐ ಹಣ ಪಾವತಿಸಿಲ್ಲ ಎಂಬ ಕಾರಣಕ್ಕೆ ಆರು ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸಿ ಮತ್ತು 5000 ಸಾವಿರ ದಂಡವನ್ನು ವಿಧಿಸಿದರು.

ಇದಾದ ಬಳಿಕ ಮತ್ತೆ ಇದೀಗ ಜಯಪ್ರದಾ ಅವರನ್ನು ಜಾಮೀನು ರಹಿತ ಬಂಧನ ವಾರಂಟನ್ನು ರಾಂಪುರ ಹೈಕೋರ್ಟ್ ಹೊರಡಿಸಿದೆ ಎಂದು ತಿಳಿದುಬಂದಿದೆ.

ಹೌದು, ನಟಿ ಜಯಪ್ರದಾ ಅವರನ್ನು ಬಂಧಿಸಿ ಫೆ. 27 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ. ಈ ಹಿಂದಿನ ಕೋರ್ಟ್ ಆದೇಶದಂತೆ ನಟಿ ಜಯಪ್ರದಾ ಅವರನ್ನು ಜನವರಿ 10ರೊಳಗೆ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ, ಪೊಲೀಸರ ಕೈಗೆ ಸಿಗದಂತೆ ಜಯಪ್ರದಾ ತಪ್ಪಿಸಿಕೊಳ್ಳುತ್ತಿದ್ದಾರಂತೆ. ಹಾಗಾಗಿ ಕೋರ್ಟ್ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಫೆಬ್ರವರಿ 27ರಂದು ಬಂಧಿಸಿ ಕೋರ್ಟಿಗೆ ಹಾಜರು ಪಡಿಸುವಂತೆ ಸೂಚಿಸಿದೆ.

2019ರ ಎರಡು ಪ್ರಕರಣಗಳಲ್ಲಿ ಜಯಪ್ರದಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು 2019ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನಟಿ ತಲೆಮರೆಸಿಕೊಂಡಿದ್ದಾರೆ.

ವರದಿಯ ಪ್ರಕಾರ, ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಅವರು ಏಳನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರವೂ ಜಯಪ್ರದಾ ನ್ಯಾಯಾಲಯಕ್ಕೆ ವಿಚಾರಣೆಗೆ ಬಂದಿಲ್ಲ ಎಂದು ಹೇಳಿದರು.

 

Related