ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಸದಸ್ಯರು

ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಸದಸ್ಯರು

ಯಲಬುರ್ಗಾ : ಪಟ್ಟಣದ ಇಲಾಖೆ ಕಚೇರಿಯಲ್ಲಿ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಹನುಮಂತಪ್ಪ ಕಲಭಾವಿ ಹಾಗೂ ತಾಲೂಕಿನ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಭೆ ನಡೆಸಿದರು.

ಕೊರೋನಾ ನಿಮಿತ್ಯ ತೋಟಗಾರಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದು ತೋಟಗಾರಿಕೆ ಇಲಾಖೆ ಹೆಚ್ಚಿನ ಪ್ರೋತ್ಸಾಹ ಧನ ನೀಡಬೇಕು ಎಂದು ತಾಲೂಕಿನ ವಿವಿಧ ಭಾಗಗಳಲ್ಲಿ ಪುಷ್ಪಕೃಷಿ ಸೇರಿದಂತೆ.

ಹಲವಾರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ಸಂಘದ ಸದಸ್ಯರು ವ್ಯಾಪ್ತಿಯಲ್ಲಿ ಕೊರೋನಾ ಸಂದರ್ಭದಲ್ಲಿ ತೋಟಗಾರಿಕೆ ಬೆಳೆಗಾರರ ನೆರವಿಗೆ ನಿಂತಿದ್ದು ಒಳ್ಳೆಯ ಕಾರ್ಯ ಎಂದರು.

ಕುಕನೂರು ಎಪಿಎಂಸಿಗೆ ತೋಟಗಾರಿಕೆ ಬೆಳೆಗಾರರ ಸಂಘದದಿಂದ ಓರ್ವ ನಿರ್ದೇಶಕರನ್ನು ಆಯ್ಕೆ ಮಾಡಬೇಕಿತ್ತು. ತಹಸೀಲ್ದಾರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುತ್ತಿದ್ದು ಸರ್ವಸದಸ್ಯರು ಪಾಲ್ಗೊಳ್ಳಬೇಕು ಎಂದು ಅಧ್ಯಕ್ಷ ಸಭೆಗೆ ತಿಳಿಸಿದರು.

Related