ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಹಾಕಿದ್ದಾರೆ: ಡಿವಿಎಸ್

ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಹಾಕಿದ್ದಾರೆ: ಡಿವಿಎಸ್

ಬೆಂಗಳೂರು: ‌ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿರುವುದರಿಂದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಅವರ ಹಾಕಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂದು ಆರತಿ ಮಾಡಿ ಬರಮಾಡಿಕೊಂಡು ಈಗ ಮಂಗಳಾರತಿ ಮಾಡಿ ನನ್ನನ್ನು ಹೊರ ಹಾಕಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಆರ್ ಅಶೋಕ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಎನ್​ಡಿಎಗೆ ಜೆಡಿಎಸ್ ಸೇರ್ಪಡೆ ಆಗಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಪಕ್ಷಕ್ಕೆ ಜೀವ ತೇಯ್ದವರನ್ನು ಕಡೆಗಣಿಸಬಾರದು ಎಂದು ಹೇಳಿರುವ ಸದಾನಂದಗೌಡ, ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದೆ. ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ. ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

 

Related