ಕಸ ಸಂಗ್ರಹಣೆ ಶುಲ್ಕಕ್ಕೆ ವಿರೋಧ

ಕಸ ಸಂಗ್ರಹಣೆ ಶುಲ್ಕಕ್ಕೆ ವಿರೋಧ

ಬೆಂಗಳೂರು: ಬಿಬಿಎಂಪಿ ಕಸ ಸಂಗ್ರಹಣೆಗೆ ಮಾಸಿಕ ಶುಲ್ಕ ವಿಧಿಸುತ್ತಿರುವುದನ್ನು ಹಾಗೂ ವಿವಿಧ ಜನವಿರೋಧಿ ನೀತಿಗಳನ್ನು ಖಂಡಿಸಿ, ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬಿಬಿಎಂಪಿ ಕಸ ಸಂಗ್ರಹಣೆಗೆ ಮಾಸಿಕ ಶುಲ್ಕ ವಿಧಿಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ಹೊರಹಾಕಿದರು.

ಬಿಜೆಪಿ ದುರಾಡಳಿತದಿಂದ ಬೆಂಗಳೂರು ಮತ್ತೆ ಗಾರ್ಬೆಜ್ ನಗರವಾಗಿ ಪರಿವರ್ತಿತವಾಗುತ್ತಿದೆ. ಬಿಜೆಪಿ ಕಸದಲ್ಲೂ ಕೋಟಿಗಟ್ಟಲೇ ಹಣವನ್ನು ಲೂಟಿ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ಹಿರಿಯ ಮುಖಂಡರುಗಳಾದ ಮಾಜಿ ಸಚಿವ ರಾಮಲಿಂಗರೆಡ್ಡಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಲೀಮ್ ಅಹಮದ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಸ್. ಮನೋಹರ್ ಜಿ.ಜನಾರ್ಧನ್. ಎ. ಆನಂದ್. ಎಮ್.ಎ. ಸಲೀಮ್. ಶ್ರೀಧರ್.ಪುಟ್ಟರಾಜು ಚಂದ್ರು.ಶಶಿಭೂಷಣ್ ಮತ್ತು ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದರು.

Related