ಎಲ್ಲ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಡಿಕೆಶಿ

ಎಲ್ಲ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂದು ಚರ್ಚೆ ನಡೆಯುತ್ತಿದ್ದು ನೆನ್ನೆ ಭಾನುವಾರ ಸಂಜೆ ಹೈ ವೋಲ್ಟೇಜ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂದು ಚರ್ಚಿಸಲಾಗಿದೆ.

ಹೌದು, ನಿನ್ನೆ ನಗರದ ಖಾಸಗಿ ಶಾಂಗ್ರಿಲಾ ಹೋಟೆಲ್​ನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (CLP meeting) ನಡೆಯಿತು. ಪಕ್ಷದಿಂದ ಆಯ್ಕೆಯಾದವರೆಲ್ಲರೂ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಏನು ನಡೆಯಿತು ಅನ್ನೋದು ಹೊರಗಿನವರಿಗೆ ಗೊತ್ತಾಗಲಿಲ್ಲ. ಮಾಧ್ಯಮ ಪ್ರತಿನಿಧಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸಿಎಲ್ಪಿಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಪ್ರಶ್ನಿಸಿದಾಗ, ಅವರು ಚುಟುಕಾಗಿ ಒನ್ ಲೈನ್ ರೆಸ್ಯೂಲಷನ್ ಅನ್ನು ಸಭೆಯಲ್ಲಿ ಅಂಗೀಕರಿಸಿದ್ದಾಗಿ ಹೇಳಿದರು. ಮುಖ್ಯಮಂತ್ರಿ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಅವರು, ಶಾಸಕರ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ಕಳಿಸಲಾಗಿದೆ, ಅವರು ನಿರ್ಣಯ ತೆಗೆದುಕೊಳ್ಳುತ್ತಾರೆ ಅಂದರು.

Related