ಜನರ ಸಂಕಷ್ಟಗಳಿಗೆ ಸದಾ ಸ್ಪಂದಿಸುವೆ  

ಜನರ ಸಂಕಷ್ಟಗಳಿಗೆ ಸದಾ ಸ್ಪಂದಿಸುವೆ  

ಅರಸೀಕೆರೆ: ನಗರದ ಶ್ರೀ ಜಯಚಾಮ ರಾಜೇಂದ್ರ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಉದ್ಘಾಟನೆ ಮಾಡಿದರು ಮತ್ತು ಅರಸೀಕೆರೆ ನಗರ ಶಾಸಕರಾದ ಶಿವಲಿಂಗೇಗೌಡರು ಕಾರ್ಯಕ್ರಮದಲ್ಲಿ ಮಾತನಾಡಿ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಮತ್ತು ಸುಮಾರು ೮೦ ರಿಂದ ೧೫೦ ಬೆಡ್ ವ್ಯವಸ್ಥೆ ಮಾಡಲಾಗಿದೆ ಮತ್ತು ಕೋವಿಡ್ -19 ಅನ್ನು ತಡೆಗಟ್ಟುವಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಸಿದ್ದ ಮಾಡಲಾಗಿದೆ.
ಅರಸೀಕೆರೆ ಜನತೆಯು ನನ್ನನ್ನ ಶಾಸಕರನ್ನಾಗಿ ಆಯ್ಕೆ ಮಾಡಿರುವುದರಿಂದ ಜನರ ಪರವಾಗಿ ಕೆಲಸ ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಮತ್ತು ಅರಸೀಕೆರೆಯ ಆಸ್ಪತ್ರೆಯ ಕೆಲಸಗಳಿಗೆ ದುಡಿದಿದ್ದೇನೆ.
ಇನ್ನು ಮುಂದಿನ ದಿನಗಳಲ್ಲಿ ಅರಸೀಕೆರೆಯ ಸ್ವಚ್ಛತೆಯನ್ನು ಕಾಪಾಡುವಲ್ಲಿ ಜನರ ಕಾರ್ಪಣ್ಯಗಳಿಗೆ ಸ್ಪಂದಿಸುವಲ್ಲಿ ಹೆಚ್ಚಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಅರಸೀಕೆರೆ ತಾಲೂಕಿನ ದಂಡಾಧಿಕಾರಿಗಳಿಗೆ ಸಂತೋಷ್ ಕುಮಾರ್ ಮತ್ತು ಆರೋಗ್ಯಧಿಕಾರಿ ಕರಿಯಪ್ಪ ಮತ್ತು ಅಣ್ಣ ನಾಯಕನಹಳ್ಳಿ ವಿಜಯಕುಮಾರ್ ನಗರಸಭೆ ಅಧ್ಯಕ್ಷರು ಎಲ್ಲ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು

Related