ಬೆಂಗಳೂರು ದಕ್ಷಿಣದಲ್ಲಿ ಅಮಿತ್ ಶಾ ಅಬ್ಬರ

ಬೆಂಗಳೂರು ದಕ್ಷಿಣದಲ್ಲಿ ಅಮಿತ್ ಶಾ ಅಬ್ಬರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ಕೇಂದ್ರ ನಾಯಕ ಅಮಿತ್ ಶಾ ಅವರು ಇಂದು ರೋಡ್ ಶೋ ಮಾಡುವ ಮೂಲಕ ಭರ್ಜರಿ ಮತ ಪ್ರಚಾರ ಮಾಡಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ, ಬೊಮ್ಮನಹಳ್ಳಿ ವಿವೇಕಾನಂದ ಸರ್ಕಲ್ ನಿಂದ ಸುಮಾರು ಎರಡು ಕಿಲೋಮೀಟರ್ ಬೊಮ್ಮನಹಳ್ಳಿ ಕ್ಷೇತ್ರದಾದ್ಯಂತ ಬೃಹತ್ ರೋಡ್ ಶೋ ಮೂಲಕ ಕೇಂದ್ರ ಸಚಿವ ಅಮಿತ್ ರವರು ಇಂದು ತೇಜಸ್ವಿ ಸೂರ್ಯ ಪರವಾಗಿ ಮತ ಪ್ರಚಾರ ಕೈಗೊಂಡಿದ್ದರು.

ಇನ್ನು ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಶಾಸಕ ಎಂ ಸತೀಶ್ ರೆಡ್ಡಿ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ರಾಮನ ಮೂರ್ತಿ ನೀಡುವ ಮೂಲಕ ಅಮಿತ್ ಶಾ ರವರಿಗೆ ಬರಮಾಡಿಕೊಂಡರು.

ಈ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಎಂದು ಕೂಗುವ ಮೂಲಕ ಅದ್ದೂರಿಯಾಗಿ ಅಮಿತ್ ಶಾ ಅವರನ್ನು ಸ್ವಾಗತಿಸಿದರು.

ಇನ್ನು ಈ ರೋಡ್ ಶೋನಲ್ಲಿ ತೇಜಸ್ವಿ ಸೂರ್ಯ ಅವರಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಹಾಗೂ ಗದಗ-ಹಾವೇರಿ, ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ್ ಬೊಮ್ಮಾಯಿ ಮತ್ತು ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related