ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸಲಾಗಿದ್ದು, ಸಂಜೆ 2 ಗಂಟೆ ಬದಲು 1 ಗಂಟೆ ಮಾತ್ರ ಜನ ಸಾಮಾನ್ಯರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಹೇಳಿದ್ದಾರೆ.
ಕೋವಿಡ್ ಕುರಿತು ಆಯುರ್ವೇದ ವೈದ್ಯ ಡಾ.ವಿನಯ್ ಎಸ್. ಸಿಂಗರಾಜಪುರ ಅವರ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,”ಸಿಎಂ ಬಿ.ಎಸ್.ಯಡಿಯೂರಪ್ಪ ಸೋಂಕು ನಿಯಂತ್ರಣ ಭಾಗವಾಗಿ ಜನದಟ್ಟಣೆ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದು, ಅದರಂತೆ ಮಧ್ಯಾಹ್ನ 3.30 ರಿಂದ 4.30ರವರೆಗೆ ಆಡಳಿತ ಕೇಂದ್ರಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ,” ಎಂದರು.