ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ: ಡಿ ಕೆ ಸುರೇಶ್ ವಾಗ್ದಾಳಿ

ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ: ಡಿ ಕೆ ಸುರೇಶ್ ವಾಗ್ದಾಳಿ

ಬೆಂಗಳೂರು, ಫೆ. 2 : ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಗತಿಪರರ ವಿರುದ್ಧ ಮಾತನಾಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಅನಂತ್ ಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥರಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದು ಉತ್ತಮ ಎಂದು ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಗಡೆ ಯಾರಿಗೂ ಬೇಡವಾದ ವಸ್ತು. ಬಿಜೆಪಿಯವರಿಗೂ ಬೇಡವಾಗಿದ್ದಾರೆ. ಅವರನ್ನು ಬೆಂಗಳೂರಿನ ಫೇಮಸ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚೆಕ್ ಮಾಡಿಸುವುದು ಒಳಿತು. ‘ಬ್ರಿಟಿಷರೊಂದಿಗೆ ಒಳಒಪ್ಪಂದ ಮಾಡಿದವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಬಿಂಬಿಸಲಾಯಿತು’- ಅನಂತ್ ಕುಮಾರ್ ಹೆಗಡೆ ಸ್ವಾತಂತ್ರ್ಯ ಹೋರಾಟಗಾರರು ಇರದೇ ಹೋಗಿದ್ದರೆ ಹೆಗಡೆಗೂ ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ. ಬ್ರಿಟಿಷರ ಆಳ್ವಿಕೆ ಅಥವಾ ಹಿಟ್ಲರ್ ಮಾದರಿ ಆಡಳಿತ ಇದ್ದಿದ್ದರೆ, ಹೆಗಡೆಗೂ ಮಾತನಾಡುವ ವಾಕ್ ಸ್ವಾತಂತ್ರ್ಯ ಇರುತ್ತಿರಲಿಲ್ಲ. ಅವರು ಇಷ್ಟೊಂದು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಅಂದ್ರೆ ಸ್ವಾತಂತ್ರ್ಯ

Related