ಕೌರವನ ವಿರುದ್ಧ ಕೆರಳಿದ ಅನ್ನದಾತ

ಕೌರವನ ವಿರುದ್ಧ ಕೆರಳಿದ ಅನ್ನದಾತ

ಕೊಪ್ಪಳ : ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಕೂಡಲೇ ರಾಜ್ಯದ ರೈತರೊಂದಿಗೆ ಕ್ಷಮೆ ಕೇಳಬೇಕು ಎಂದರು.

ಇಲ್ಲವೇ ಸರ್ಕಾರ ಪಾಟೀಲರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿ  ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ನಗರದ ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಿ ಸಚಿವರ ಪ್ರತಿಕೃತಿ ದಹಿಸಲಾಯಿತು.

ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರು ರೈತರ ಬಗ್ಗೆ ಒಳ್ಳೆಯ ಮಾತು ಆಡುವ ಬದಲು, ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಬದಲು ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಜರಿದಿದ್ದಾರೆ. ಇದೊಂದು ನಾಚಿಕೆಗೇಡಿನ ಸಂಗತಿ.

ರೈತರು ಸುಮ್ಮನೆ ಆತ್ಮಹತ್ಯೆ ಮಾಡಿಕೊಳ್ಳಲ್ಲ. ಅವರು ಬೆಳೆದ ಬೆಲೆಗೆ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ. ಕಷ್ಟಪಟ್ಟು ಬೆಳೆದರೂ ನೂರೆಂಟು ತೊಂದರೆ ಅನುಭವಿಸುವಂತಾಗಿದೆ. ಸರ್ಕಾರವೂ ರೈತರ ನೋವಿಗೆ ಸ್ಪಂದಿಸುತ್ತಿಲ್ಲ.

ಸಾಲ ಮಾಡಿಕೊಂಡು ತೀರಿಸಲಾಗದೆ ಮನನೊಂದು ಆತನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ರೈತರ ಬಗ್ಗೆ ಕೃಷಿ ಸಚಿವರು ಹೇಡಿಗಳು ಎಂದಿರುವುದು ನಿಜಕ್ಕೂ ರೈತರಿಗೆ ಮಾಡಿದ ದೊಡ್ಡ ಅಪಮಾನ ಎಂದು ಅವರ ವಿರುದ್ಧ ರೈತ ಸಂಘವು ಗುಡುಗಿತು.

Related