ಕೊರೋನಾಗೆ ಮತ್ತೊಬ್ಬ ಜನಪ್ರತಿನಿಧಿ ಬಲಿ

ಕೊರೋನಾಗೆ ಮತ್ತೊಬ್ಬ ಜನಪ್ರತಿನಿಧಿ ಬಲಿ

ಬೀದರ್ : ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಮಾರಕ ಕೊರೋನಾಗೆ ಬಲಿಯಾಗಿದ್ದಾರೆ.

ಕೊರೋನಾ ಸೋಂಕು ತಗುಲಿದ ಹಿನ್ನಲೆಯಲ್ಲಿ 65 ವರ್ಷದ ನಾರಾಯಣ ರಾವ್ ಬೆಂಗಳೂರಿನಲ್ಲಿ ಮಣಿಪಾಲ್ ಆಸ್ಪತ್ರೆಗೆ ಸೆಪ್ಟೆಂಬರ್ 1 ರಂದು ದಾಖಲಾಗಿದ್ದು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3-55 ಕ್ಕೆ ವಿಧಿವಶರಾಗಿದ್ದಾರೆ. ಈ ಮೊದಲು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.

Related