ಬಿಎಂಟಿಸಿಗೆ ಮತ್ತೊಂದು ಬಲಿ

ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿಗ ಬಸ್‌ ಗೆ 21 ವರ್ಷದ ಗೃಹಿಣಿ ಬಲಿಯಾಗಿದ್ದು ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಫ್ಲೈ ಓವರ್ ಮೇಲೆ ಸೀಮಾ(21) ಬಿಎಂಟಿಸಿ ಬಸ್ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ (ಡಿ.13) ಸಂಜೆ 6:30 ರ ವೇಳೆಗೆ ನಡೆದಿದೆ

ಬಿಎಂಟಿಸಿ ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಅಪಘಾತ ಆಗಿದೆ ಎನ್ನುವಂತಹ ಆರೋಪ ಕೇಳಿ ಬಂದಿದೆ.  ಬಸ್ ಪಕ್ಕದಲ್ಲಿ ಚಲಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಬಸ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ ಪಕ್ಕದಲ್ಲಿ ಚಲಿಸ್ತಿದ್ದ ದ್ವಿಚಕ್ರವಾಹನಕ್ಕೆ ಗುದ್ದಿದ್ದರಿಂದ ಆಯಾತಪ್ಪಿ ಬಿದ್ದ ಸವಾರರು ಅದೃಷ್ಟವಶಾತ್ ಒಂದೂವರೆ ವರ್ಷದ ಮಗು ಗಾನವಿ ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದು ಕಳೆದ 8 ವರ್ಷದಿಂದ ಬೆಸ್ಕಾಂ ನಲ್ಲಿ ಲೈನ್ ಮೆನ್ ಆಗಿ‌‌ ಕೆಲಸ ಮಾಡ್ತಿದ್ದಾರೆ ಮೂಲತಃ ವಿಜಯನಗರ ಜಿಲ್ಲೆ, ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳು ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು‌ ನೆಲೆಸಿದ್ದ ದಂಪತಿಗಳು.

ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಗೃಹಿಣಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಬಸ್‌ ಅಪಘಾತ ಬಳಿಕ ಬಸ್ ಬಿಟ್ಟು ಪರಾರಿಯಾಗಿರುವ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ.

Related