ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು: ಸಿಎಂ

ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು: ಸಿಎಂ

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿದ ಜಿಲ್ಲೆಗಳಲ್ಲಿ (ಡಿ.27 ಬುಧವಾರ) ದಿಂದ ಕನ್ನಡ ನಾಮಪಲಕ ಹಾಕುವಂತೆ ಕರವೇ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಧರಣಿ ಮಾಡಿದ್ದಕ್ಕೆ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಆದರೆ ಅವರು ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.

 

Related