ಚಿನ್ನದ ಗಣಿ ಕಂಪನಿ ಅಧ್ಯಕ್ಷರ ನೇಮಕ

ಚಿನ್ನದ ಗಣಿ ಕಂಪನಿ ಅಧ್ಯಕ್ಷರ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆಯಂತೆ ನಿಗಮ-ಮಂಡಳಿಗಳಿಗೆ ನೇಮಕ ಆದೇಶದ ಸರಣಿ ಮುಂದುವರಿದಿದ್ದು, ಬುಧವಾರ ಸಂಜೆಯ ವೇಳೆಗೆ 15ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ ನೇಮಕ ಆದೇಶಗಳು ಹೊರ ಬೀಳುವ ಸಾಧ್ಯತೆಗಳಿವೆ.

ರಾಯಚೂರು ಜಿಲ್ಲೆ ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ ಅವರನ್ನು ಕರ್ನಾಟಕ ರಾಜ್ಯ ಖನಿಜಗಳ ನಿಗಮ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್)ದ ನಿರ್ದೇಶಕರನ್ನಾಗಿ ನೇಮಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆದೇಶಿಸಿದೆ.

ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರ ಮಹಾಮಂಡಳಿ ಹುಬ್ಬಳ್ಳಿಯ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಡಾ. ವಿಶ್ವನಾಥ ಈ ಪಾಟೀಲ, ಕರ್ನಾಟಕ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಳ ನಿಗಮ  ಬೆಂಗಳೂರು ಅಧ್ಯಕ್ಷರನ್ನಾಗಿ  ಯಲ್ಲಮ್ಮ ಮಲ್ಲಪ್ಪ ಬೆಂಡಿಗೇರಿಯವರನ್ನು ಮತ್ತು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ  ಶರಣು  ಭೀಮಣ್ಣ  ತಳ್ಳಿಕೇರಿಯವರನ್ನು  ನೇಮಕ  ಮಾಡಲಾಗಿದೆ.

Related