ಅರಗ ಜ್ಞಾನೇಂದ್ರಗೆ ಬುದ್ಧಿ ಭ್ರಮಣೆಯಾಗಿದೆ: ಈಶ್ವರಪ್ಪ

ಅರಗ ಜ್ಞಾನೇಂದ್ರಗೆ ಬುದ್ಧಿ ಭ್ರಮಣೆಯಾಗಿದೆ: ಈಶ್ವರಪ್ಪ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಚುನಾವಣೆ ಹೊಸ್ತಿಲಲ್ಲಿ ಅಭ್ಯರ್ಥಿಗಳು ಒಬ್ಬರ ಮೇಲೆ ಒಬ್ಬರು ಆರೋಪಗಳನ್ನು ಮಾಡುತ್ತಿದ್ದಾರೆ.

ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಅವರು ಅರಗ ಜ್ಞಾನೇಂದ್ರಗೆ ಅವರಿಗೆ ಹುಚ್ಚು ಹಿಡಿದಿದೆ ಎನ್ನುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರಿಗೆ ಮತದಾನ ದಿನದಂದು ಚೀಟಿ ಹಂಚಲು ಜನ ಇಲ್ಲ ಎಂಬ ಮಾತಿಗೆ ಕೆಎಸ್ ಈಶ್ವರಪ್ಪ ಅವರು ಆರಗ ಜ್ಞಾನೇಂದರಿಗೆ ತಿರುಗೇಟು ನೀಡಿದ್ದಾರೆ.

ಒಬ್ಬ ಹಿರಿಯ ರಾಜಕಾರಣಿಯಾಗಿ ಇನ್ನೊಬ್ಬ ಹಿರಿಯ ರಾಜಕಾರಣಿಗೆ ಹೀಗೆ ಮಾತನಾಡುತ್ತಾರಲ್ಲ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಅರಗ ಜ್ಞಾನೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ

ಅವರ ಕ್ಷೇತ್ರದಲ್ಲಿ ಯುವಕರು, ಬಜರಂಗದಳದ ಕಾರ್ಯಕರ್ತರು, ಪರಿವಾರದ ಕಾರ್ಯಕರ್ತರು, ಮಹಿಳಾ ಮತದಾರರು ದೊಡ್ಡ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸುತ್ತಿದ್ದಾರೆ. ಇದನ್ನು ಕಂಡು ಅವರು ಕಂಗಾಲಾಗಿದ್ದಾರೆ.

ನಿತ್ಯ ನನ್ನ ಬೆಂಬಲಿತ ಕಾರ್ಯಕರ್ತರ ಮನೆಗೆ ಹೋಗಿ ಓಲೈಸುವುದೇ ಅವರ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದರು. ನಾಳೆ ನಾನು ತೀರ್ಥಹಳ್ಳಿಯಲ್ಲಿ ಎರಡು ಸಭೆ ನಡೆಸುತ್ತಿದ್ದೇನೆ. ಜ್ಞಾನೇಂದ್ರ ಅವರಿಗೆ ಧೈರ್ಯ ಇದ್ದರೆ ಅವರೇ ಬಂದು ನೋಡಲಿ ಎಂದರು.

 

Related