ಆಶಾಕಾರ್ಯಕರ್ತೆಗೆ ಕೊರೋನಾ

ಆಶಾಕಾರ್ಯಕರ್ತೆಗೆ ಕೊರೋನಾ

ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಆಶಾಕಾರ್ಯಕರ್ತೆಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಆಶಾಕಾರ್ಯಕರ್ತೆ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದವರೆಂದು ತಿಳಿದು ಬಂದಿದೆ. ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಆಶಾಕಾರ್ಯಕರ್ತೆ ಮದ್ದೂರು ತಾಲ್ಲೂಕಿನ ಮಡೇನಹಳ್ಳಿ ಗ್ರಾಮದಲ್ಲಿರುವ ತಮ್ಮ ತಾಯಿ ಮನೆಯಲ್ಲಿ ವಾಸವಿದ್ದರು. ಆದ ಕಾರಣ ಮಡೇನಹಳ್ಳಿ ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

Related