ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ : ಆರೋಪಿ ಪರಾರಿ

ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ : ಆರೋಪಿ ಪರಾರಿ

ಚಿಕ್ಕಮಗಳೂರು : ಅರಣ್ಯ ವ್ಯಾಪ್ತಿಯಲ್ಲಿರುವ ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೇ ಗ್ರಾಮದಲ್ಲಿ ನಡೆದಿದೆ.

ಪ್ರವೀಣ್ ಎಂಬವರ ಗುಡಿಸಲು ಅರಣ್ಯ ಪ್ರದೇಶದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗುಡಿಸಲು ತೆರವು ಮಾಡಲು ತೆರಳಿದ್ದರು. ಆದರೆ ಈ ವೇಳೆ ಕುಟುಂಬ ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಗುಡಿಸಲು ಅರಣ್ಯ ವ್ಯಾಪ್ತಿಯಲ್ಲಿದೆ ಎಂದು ಅಧಿಕಾರಿಗಳ ವಾದ ಮಾಡಿದರೆ, ಈ ಜಾಗ ನಮ್ಮದು ಎಂದು ಮನೆಯವರ ವಾದ ಮಾಡಿದ್ದಾರೆ.

ಈ ವೇಳೆ ಅರಣ್ಯ ಸಿಬ್ಬಂದಿ ಚಂದನ್ ಗೌಡ ಮೇಲೆ ದೊಣ್ಣೆಯಿಂದ ಪ್ರವೀಣ್ ಎಂಬಾತ ಹಲ್ಲೆ ಮಾಡಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಆರೋಪಿ ಪ್ರವೀಣ್ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಮಲೆನಾಡಿನಲ್ಲಿ ಅರಣ್ಯ ಇಲಾಖೆ ಮತ್ತು ಜನರ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related