ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹಲ್ಲೆ

ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹಲ್ಲೆ

ರಾಯಚೂರು : ಶುಲ್ಕ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಹಾಗೂ ಆತನ ಪೋಷಕರ ಮೇಲೆ ಸಿಂಧನೂರು ಪಟ್ಟಣ ಠಾಣೆಯ ಆವರಣದಲ್ಲಿ ಶಾಲಾ ಮುಖ್ಯಸ್ಥೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಸಿಂಧನೂರು ಪಟ್ಟಣ ಠಾಣೆ ಬಳಿ ಈ ಘಟನೆ ನಡೆದಿದೆ.

10ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಪೋಷಕರ ಮೇಲೆ ಮಾಂಟೆಸ್ಸರಿ ಶಾಲೆಯ ಆಡಳಿತ ಮಂಡಳಿಯ ಕಾಮೆಪಲ್ಲಿ ಸತೀಶ್ ಕುಮಾರ್, ಶಾಲೆ ಮುಖ್ಯಸ್ಥೆ ವೆಂಕಟರತ್ನ ಅವರು ವಿದ್ಯಾರ್ಥಿ ಮತ್ತು ಆತನ ಪೋಷಕರ ಮೇಲೆ ಹಲ್ಲೆ ಮಾಡಿದ್ದಾರೆ.

ವಿದ್ಯಾರ್ಥಿಯ ತಾಯಿ ನಾಗವಿದ್ಯಾ ಮಾಂಟೆಸ್ಸರಿ ಶಾಲೆಯ ಆಡಳಿತ ಮಂಡಳಿಯ ಕಾಮೆಪಲ್ಲಿ ಸತೀಶ್ ಕುಮಾರ್, ಶಾಲೆ ಮುಖ್ಯಸ್ಥೆ ವೆಂಕಟರತ್ನ ವಿರುದ್ಧ ದೂರು ನೀಡಿದ್ದಾರೆ.

Related