ಗ್ರಾಮಗಳಿಗೆ ಸಹಾಯಕ ಆಯುಕ್ತ ಭೇಟಿ

ಗ್ರಾಮಗಳಿಗೆ ಸಹಾಯಕ ಆಯುಕ್ತ ಭೇಟಿ

ಲಿಂಗಸುಗೂರು : ಕೃಷ್ಣಾ ನದಿತೀರದ ಗ್ರಾಮಗಳಿಗೆ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಭೇಟಿ ನೀಡಿ ಪರಿಶೀಲಿನೆ ಮಾಡಿದರು.

ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶಗಳಲ್ಲಿ ವಾಸ ಮಾಡುವ ಕುಟುಂಬಗಳಿಗೆ ಸೂಕ್ತ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳಲಾಗುವುದು. ಮಾದರಗಡ್ಡಿ, ಹೊಂಕಮ್ಮನಗಡ್ಡಿಯ ಕುಟುಂಬಗಳಿಗೆ ಪ್ರವಾಹ ಬರುವುದಕ್ಕಿಂತ ಮುನ್ನವೇ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚನೆ ನೀಡಲಾಗಿತ್ತು.

ತಾಲೂಕು ಆಡಳಿತದ ಸೂಚನೆಯನ್ನು ಲೆಕ್ಕಿಸದೇ ಸುರಕ್ಷಿತ ಸ್ಥಳಕ್ಕೆ ಹೋಗದೇ ನಡುಗಡ್ಡೆಯಲ್ಲಿ ಇರುವುದು ತಿಳಿದು ಬಂದಿದೆ. ಪ್ರವಾಹ ಇಳಿಮುಖವಾದ ನಂತರ ಆಗ್ನಿ ಶಾಮಕದಳದ ಸಹಾಯದಿಂದ ದೋಣಿ ಮೂಲಕ ಕರೆತರಲು ಪ್ರಯತ್ನಿಸಲಾಗುವುದು. ಅವರ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಿಪಿಐ ಯಶವಂತ ಬಿಸನ್ನಳ್ಳಿ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

Related