ಜನರಲ್ಲಿ ಜಾಗೃತಿ ಮೂಡಿಸಿದ : ಡಿಸಿ

ಜನರಲ್ಲಿ ಜಾಗೃತಿ ಮೂಡಿಸಿದ : ಡಿಸಿ

ಯಾದಗಿರಿ : ಕೋವಿಡ್ ಕೇಂದ್ರಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿ ಪರೀಕ್ಷೆ ಮಾಡಿ ತಕ್ಷಣದಲ್ಲಿಯೇ ವರದಿ ನೀಡಿ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.
ಸಮುದಾಯದಲ್ಲಿ ಕೊರೊನಾ ಕುರಿತು ಭಯ ಉಲ್ಬಣವಾಗಿದೆ. ಜನರಿಗೆ ಅರಿವು ಮೂಡಿಸುವ ಕೆಲಸ ಅಗತ್ಯವಾಗಿದ್ದು,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಸಮುದಾಯದಲ್ಲಿ ಹೆಚ್ಚಾಗಿ ಸಂಪರ್ಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಉಪಯೋಗಿಸುವಂತೆ ಹೇಳಬೇಕು. ಗ್ರಾಮಗಳಲ್ಲಿನ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರ ಸಹಾಯ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.

Related