ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ಸಿಕ್ಕಿದ್ದು ವರಮಹಾಲಕ್ಷ್ಮಿ ದಿನ ಶುಕ್ರವಾರವೇ ಬೆಳಗಾವಿಯ ಹಿಂಡಲಗ ಜೈಲಿನಿಂದ ಬಿಡುಗಡೆ ಭಾಗ್ಯ ಅವರಿಗೆ ಸಿಗಲಿದೆಯೇ ಎಂದು ಕೇಳಿ ಬರುತ್ತಿದೆ.
ಜಿ.ಪಂ ಸದಸ್ಯ ಯೋಗೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಎಂದು ಜೈಲು ಸೇರಿದ್ದ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಜಾಮೀನು ನೀಡಿದೆ. ಆದರೆ, ಜಾಮೀನು ಸಿಕ್ಕರೂ ವಿನಯ್ ಕುಲಕರ್ಣಿ ಬಿಡುಗಡೆ ಇಂದು ಬಿಡುಗಡೆಯಾಗುತ್ತಾರೆಯೇ ಇಲ್ಲವೇ ನಾಳೆಯೇ ಎಂಬುದು ಕುತೂಹಲ ಇತ್ತು.
ಕಳೆದ ಒಂಭತ್ತೂವರೆ ತಿಂಗಳಿನಿಂದ ವಿನಯ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
ಧಾರವಾಡದ ಶಿವಗಿರಿ ಬಡಾವಣೆಯಲ್ಲಿನ ನಿವಾಸದ ಎದುರು ವಿಜಯೋತ್ಸವ ನಡೆಸಲಾಗಿತ್ತು. ಜಿ.ಪಂ ಬಿಜೆಪಿ ಸದಸ್ಯ ಮತ್ತು ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದರು.