ಹೆಚ್.ಡಿ ರೇವಣ್ಣಗೆ ಜಾಮೀನು

ಹೆಚ್.ಡಿ ರೇವಣ್ಣಗೆ ಜಾಮೀನು

ಬೆಂಗಳೂರು: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ತಮ್ಮ ಮನೆ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಎಚ್ ಡಿ ರೇವಣ್ಣ ಅವರಿಗೆ ಸದ್ಯ ಜಾಮೀನು ಮಂಜೂರು ಮಾಡಲಾಗಿದೆ.

ಹೌದು, ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಪದವೀಧರರ ಕ್ಷೇತ್ರ ಚುನಾವಣೆ; ಮತದಾರರ ಪಟ್ಟಿ ಪ್ರಕಟ

ಈ ಕುರಿತು ಕಾಯ್ದಿರಿಸಲಾಗಿದ್ದ ಆದೇಶವನ್ನು ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ವಿಚಾರಣೆಯ (42ನೇ ಎಸಿಎಂಎಂ ಕೋರ್ಟ್) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು ಪ್ರಕಟಿಸಿದರು. ರೂ. 5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತರ ಒಬ್ಬರ ಶ್ಯೂರಿಟಿ ಒದಗಿಸುವುದು ಸೇರಿದಂತೆ ಮತ್ತಿತರ ಷರತ್ತುಗಳನ್ನು ವಿಧಿಸಲಾಗಿದೆ.

ಈ ಮೊದಲು ಇದೇ ನ್ಯಾಯಾಲಯ ನೀಡಿದ್ದ ಮಧ್ಯಂತರ ಜಾಮೀನಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಂತೆಯೇ ಈ ಅರ್ಜಿಯು, ಪರಿಶೀಲನೆಗೆ ಅರ್ಹವೊ ಅಲ್ಲವೋ ಎಂಬ ಆಕ್ಷೇಪದ ಮೇಲಿನ ವಾದ- ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು.

ಇನ್ನು ಹೆಚ್.ಡಿ.ರೇವಣ್ಣ ಅವರನ್ನು ಮೇ 4 ರಂದು ಬಂಧಿಸಲಾಗಿತ್ತು. ಬಳಿಕ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಅವರ ನ್ಯಾಯಾಂಗ ಬಂಧನ ಅಂತ್ಯದ ವೇಳೆಗೆ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದರು.

Related