ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಾಳೆ ರಾಮನವಮಿ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸಹಾರ ನಿಷೇಧ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹೌದು, ನಾಳೆ ಏಪ್ರಿಲ್ 17ರಂದು ರಾಮನವಮಿಯ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸಾಹಾರಿ ನಿಷೇಧ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಬಿಬಿಎಂಪಿ ಮುನ್ನೆಚ್ಚರಿಕೆಯಿಂದ ಮಾಂಸಹಾರ ನಿಷೇಧಾಜ್ಞೆಯನ್ನು ಹೇರಲಾಗಿದೆ.
ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ
ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿ ಹಬ್ಬವನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನಾಂಕದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನು ಜನಿಸಿದ ದಿನ ಇದಾಗಿದೆ.