ಬಾಳೆ ತೋಟ ಕಡಿದು ವಿಕೃತಿ

ಬಾಳೆ ತೋಟ ಕಡಿದು ವಿಕೃತಿ

ರಾಮನಗರ : ದುಷ್ಕರ್ಮಿಗಳ ಗುಂಪೊAದು ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಮಾಡಿರುವ ಘಟನೆ ತಡರಾತ್ರಿ ರಾಮನಗರದ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಅವರ ತೋಟದಲ್ಲಿ ನಡೆದಿದೆ. ತೋಟಕ್ಕೆ ಎಂಟ್ರಿಕೊಟ್ಟ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ 300ಕ್ಕೂ ಅಧಿಕ ಬಾಳೆಗಿಡಗಳನ್ನು ನಾಶ ಮಾಡಿ ವಿಕೃತಿ ಮೆರೆದಿದ್ದಾರೆ.

ಪಟೇಲ್ ರಾಜಣ್ಣ ಅವರ 6 ಎಕರೆ ಅಡಿಕೆ ತೋಟದಲ್ಲಿ ಬಾಳೆ ಗಿಡಗಳನ್ನು ನೆಟ್ಟಿದ್ದರು, ಗಿಡಗಳು ಬೆಳೆದು ಗೊನೆಗಳು ಕಟಾವು ಮಾಡುವ ಹಂತಕ್ಕೆ ಬಂದಿದ್ದವು. ಆದರೆ ಈ ಸಂದರ್ಭವನ್ನು ನೋಡಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಬಾಳೆ ಗಿಡಗಳನ್ನು ಬಲಿ ಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ.

ತೋಟದ ಒಂದು ಭಾಗದಲ್ಲಿ 300 ಕ್ಕೂ ಅಧಿಕ ಗಿಡಗಳನ್ನು ನಾಶ ಪಡಿಸಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ತೋಟಕ್ಕೆ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ನೊಂದ ರೈತ ಅಳಲು ತೋಡಿಕೊಂಡಿದ್ದಾರೆ. ಈ ಸಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಪೂರ್ವಪರ ದ್ವೇಷದಿಂದ ಈ ರೀತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

Related