ಕಾಂಗ್ರೆಸ್‌ ಮುಖಂಡನ ಬರ್ಬರ ಕೊಲೆ

ಕಾಂಗ್ರೆಸ್‌ ಮುಖಂಡನ ಬರ್ಬರ ಕೊಲೆ

ಕಾಗವಾಡ: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಒಬ್ಬ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆಯಾಗಿದೆ.

ಹೌದು, ಕಾಗವಾಡ ತಾಲೂಕಿನ ಖಿಳೇಗಾಂವ ಗ್ರಾಮದ ಕಾಂಗ್ರೆಸ್ ಮುಖಂಡ ಅಣ್ಣಪ್ಪ ಬಸಪ್ಪ ನಿಂಬಾಳ (58) ಕೊಲೆಯಾಗಿದ್ದು ಈ ಕೊಲೆಗೆ ಇಡೀ ಗ್ರಾಮಸ್ಥವೇ ಬೆಚ್ಚಿಬಿದ್ದಿದ್ದಾರೆ.

ಬುಧವಾರ ಸಂಜೆ ಹೊತ್ತಿನಲ್ಲಿ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ಸುಮಾರು ಆರು ಮಂದಿ ಮುಸು ಹಾಕಿಕೊಂಡು ಏಕಾಯಕಿ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಏಕಾಏಕಿ ಅಣ್ಣಪ್ಪ ಅವರ ಮೇಲೆ ಆರು ಮಂದಿ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಕಾರಣ ಸ್ಥಳದಲ್ಲೇ ಅಣ್ಣಪ್ಪ ಬಸಪ್ಪ ನಿಂಬಾಳ್ ಅವರು ಕೊನೆಉಸಿರೆಳೆದಿದ್ದಾರೆ. ಇನ್ನು ಆರೋಪಿಗಳು ಕೊಲೆ ಮಾಡಿ ಪರವಾಗಿಲ್ಲ.

ಅಣ್ಣಪ್ಪ ಅವರು ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಅವರ ಆಪ್ತರಾಗಿದ್ದರು. ಕೊಲೆ ವಿಷಯ ತಿಳಿದು ಶಾಸಕ ಸವದಿ ಆಸ್ಪತ್ರೆಗೆ ಭೇಟಿ ನೀಡಿದರು.

ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

Related