ಸಿಎಂ ಅಂದ್ರೆ ಕಾಮನ್ ಮ್ಯಾನ್ ಎಂದು ಮತ್ತೆ ನಿರೂಪಿಸಿಕೊಂಡ ಬಸವರಾಜ ಬೊಮ್ಮಾಯಿ.

ಸಿಎಂ ಅಂದ್ರೆ ಕಾಮನ್ ಮ್ಯಾನ್ ಎಂದು ಮತ್ತೆ ನಿರೂಪಿಸಿಕೊಂಡ ಬಸವರಾಜ ಬೊಮ್ಮಾಯಿ.

‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ’ ಪ್ರಯೋಜನ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ ನಡೆಸಿದ್ದಾರೆ. ಮಂಗಳೂರಿನ ವಿವಿಧ ಕಾಲೇಜಿನ ಆಯ್ದ ಹತ್ತು ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ ಮಾಡಿದ್ದಾರೆ.

ದಕ್ಷಿಣ ಕನ್ನಡ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಎಂ ಅಂದ್ರೆ ಕಾಮನ್ ಮ್ಯಾನ್ ಎನ್ನುವುದನ್ನು ಮತ್ತೆ ನಿರೂಪಿಸಿದ್ದಾರೆ.  ಆಳ್ವಾಸ್ ಕಾಲೇಜಿನಲ್ಲಿ ನಡೆದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಮಕ್ಕಳೊಂದಿಗೆ ಮಕ್ಕಳ ಹಾಗೆ ಬೆರೆತು ವಿದ್ಯಾರ್ಥಿಗಳ ಗಮನ ಸೆಳೆದಿದ್ದಾರೆ. ಹತ್ತು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೆರೆದಿದ್ದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮಕ್ಕಳೊಂದಿಗೆ ಉತ್ಸಾಹಭರಿತರಾಗಿ ಸಂವಾದ ಮಾಡಿದ್ದಾರೆ.

 

ವಿದ್ಯಾರ್ಥಿಗಳ ಪ್ರಶ್ನೆ ಸುಧೀರ್ಘವಾದಾಗ ಮಧ್ಯ ಪ್ರವೇಶಿಸಿದ ನಿರೂಪಕರನ್ನು ತಡೆದ ಸಿಎಂ,ಮಕ್ಕಳನ್ನು ನೀವು ಮಧ್ಯ ಪ್ರವೇಶ ಮಾಡಬೇಡಿ,ಮಕ್ಕಳು ಮುಕ್ತವಾಗಿ ಮಾತನಾಡಲಿ ಅಂತಾ ಹೇಳಿದರು.

Related