ಮತ ಚಲಾಯಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್

ಮತ ಚಲಾಯಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್

ಬೆಂಗಳೂರು: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಹೌದು, ರಾಜ್ಯದ ವಿಧಾನಸಭಾ ಚುನಾವಣೆಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರಾಜಕೀಯ ನಾಯಕರು, ಚಲನಚಿತ್ರ ನಟ ನಟಿಯರು ಬೆಳಗ್ಗೆಯೇ ಸರತಿಯಲ್ಲಿ ನಿಂತು ಮತ ಚಲಾಯಿಸಿದ್ದಾರೆ.

ಇನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಮತಗಟ್ಟೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿದ ಬಳಿಕ ಪೋಟೋಗೆ ಪೋಸ್ ನೀಡಿ ಮತ್ತಷ್ಟು ಜನರಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ.

 

Related