ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ: ರಾಮಲಿಂಗರೆಡ್ಡಿ

ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ: ರಾಮಲಿಂಗರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆಯನ್ನು ಏರಿದೆ ಆದಕಾರಣ ಇನ್ನು ಕೇವಲ ಎರಡು ಮೂರು ತಿಂಗಳಗಳಲ್ಲಿ ಬಿಬಿಎಂಪಿ ಚುನಾವಣೆ ಮಾಡಲಿದ್ದೇವೆ ಎಂದು ಸಚಿವ ರಾಮಲಿಂಗರೆಡ್ಡಿ ಸುಳಿವೊಂದನ್ನು ನೀಡಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ 8 ಮಂದಿ ಶಾಸಕರೂ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿರಿಯ ನಾಯಕರಾದ ರಾಮಲಿಂಗರೆಡ್ಡಿಯವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಸಚಿವನಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಮತ್ತಷ್ಟು ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

 

Related