ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಕೃಷಿ ಸಚಿವ ಬಿ. ಸಿ ಪಾಟೀಲ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದರು.
ನಂತರ ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಾತನಾಡಿದ ಅವರು, ಇದೇ ಆಗಸ್ಟ್ ಒಳಗೆ ಕಾಮಗಾರಿ ಶೀಘ್ರ ಮುಗಿಸುವಂತೆ ಮತ್ತು ತರಗತಿಗಳನ್ನು ಆರಂಭಿಸುವಂತೆ ಸೂಚಿಸಿದರು.
ಬಹು ವಿಸ್ತಾರವಾಗಿ ನಿರ್ಮಾಣಗೊಳ್ಳುತ್ತಿರುವ ಕೃಷಿ ವಿಶ್ವವಿದ್ಯಾಲಯ ಆರಂಭಗೊಳ್ಳಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪಾತ್ರ ಬಹಳಷ್ಟಿದ್ದು, ಅವರ ಕನಸನ್ನು ನನಸು ಮಾಡಲು ಶೀಘ್ರವೇ ಅಭಿವೃದ್ಧಿ ಕಾಮಗಾರಿಯನ್ನು ಮುಗಿಸಲಾಗುವುದು. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ಹೆಚ್ಚಿನ ಆಸಕ್ತಿ ಇದೆ ಎಂದರು.
ಸಂಸದ ಬಿ.ವೈ ರಾಘವೇಂದ್ರ. ಶಾಸಕ ಹರತಾಳು ಹಾಲಪ್ಪ, ಮಲೆನಾಡು ಪ್ರದೇಶ ಅಭಿವೃದ್ಧಿ ಅಧ್ಯಕ್ಷ ಎಸ್ ಗುರುಮೂರ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಮತ್ತು ಜಿಲ್ಲಾಧಿಕಾರಿಗಳು ಮತ್ತು ಕೃಷಿ ಅಧಿಕಾರಿಗಳು ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.