ಭಾರತ್ ಬಂದ್: ರೈತ ಸಂಘಟನೆಗಳ ಪ್ರತಿಭಟನೆ

ಭಾರತ್ ಬಂದ್: ರೈತ ಸಂಘಟನೆಗಳ ಪ್ರತಿಭಟನೆ

ಕಲಬುರಗಿ : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಹಿನ್ನೆಲೆ ಕಲಬುರಗಿ ನಗರದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿಭಟನೆ ಕೈಗೊಂಡಿವೆ.

ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಮುಖ್ಯ ರಸ್ತೆ ತಡೆ ನಡೆಸಿ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್‌ಗಳ ಸಂಚಾರ ರದ್ದು ಮಾಡಲಾಗಿದೆ. ನಿಲ್ದಾಣದಲ್ಲಿ ಬಸ್‌ಗಳು ಇಲ್ಲದೇ ಪ್ರಯಾಣಿಕರು ಸಮಸ್ಯೆ ಪಡುವಂತೆ ಆಗಿದೆ.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟಕ್ಕೆ ಕರೆ ಕೊಡಲಾಗಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಕನ್ನಡ ಪರ ಸಂಘಟನೆಗಳ ಬೆಂಬಲ ಸೂಚಿಸಿ ಬಂದ್ ನಲ್ಲಿ ಭಾಗಿಯಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Related