ಬೀದರ್ ಶಾಲೆ ವಿಚಾರ ಪ್ರಸ್ತಾಪ

ಬೀದರ್ ಶಾಲೆ ವಿಚಾರ ಪ್ರಸ್ತಾಪ

ಬೀದರ್,ಫೆ. 15 : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದಕ್ಕೆ ಬೀದರ್ ನ ಶಾಲೆಯೊಂದರ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೇಶ ದ್ರೋಹ ಪ್ರಕರಣ ದಾಖಲಿಸಿರುವ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಜ. 21 ರಂದು ಪ್ರಾಥಮಿಕ ಶಾಲೆಯಲ್ಲಿ ನಾಟಕ ಪ್ರದರ್ಶನ ಮಾಡಿದ್ದಕ್ಕೆ ಶಾಹೀನ್ ಶಾಲೆಯ ಐದನೇ ತರಗತಿ ಬಾಲಕಿಯ ತಾಯಿ,ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇರೆಗೆ ಶುಕ್ರವಾರ ಬಿಡುಗಡೆ ಮಾಡಲಾಗಿದೆ.

Related