ʼಬಿಗ್ ಬಾಸ್ʼ ಅಭಿಮಾನಿಗಳಿಗೆ ಗುಡ್ ನ್ಯೂಸ್ !

ʼಬಿಗ್ ಬಾಸ್ʼ ಅಭಿಮಾನಿಗಳಿಗೆ ಗುಡ್ ನ್ಯೂಸ್ !

ಬೆಂಗಳೂರು : ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 8 ಕೊರೋನಾ 2ನೆ ಅಲೆಯ ಭೀಕರತೆ ಹಾಗೂ ಲಾಕ್‌ಡೌನ್ ಕಾರಣಗಳಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಇದೀಗ ಬಿಗ್‌ಬಾಸ್ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದ್ದು. ಶೋ ಎಲ್ಲಿಂದ ನಿಂತಿತ್ತೋ ಅಲ್ಲಿಂದಲೇ ಶುರುವಾಗಲಿದೆ ಎಂಬ ಅಧಿಕೃತ ಘೋಷಣೆ ಹೊರ ಬೀಳ್ಳಲಿದೆ.

ಬಿಗ್‌ಬಾಸ್ ಕಾರ್ಯಕ್ರಮ ಪೂರ್ಣಗೊಳ್ಳಲು ಇನ್ನೇನು 29 ದಿನ ಬಾಕಿ ಇರುವಾಗಲೇ ಶೋ ಅರ್ಧಕ್ಕೆ ಸ್ಥಗಿತಗೊಂಡಿದ್ದು ಬಿಗ್ ಬಾಸ್ ಅಭಿಮಾನಿಗಳ ನಿರಾಸೆಗೆ ಕಾರಣವಾಗಿತ್ತು. ಆದರೆ ಇದೀಗ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಸೋಶಿಯಲ್ ಮೀಡಿಯಾದ ಮೂಲಕ ಬಿಗ್‌ಬಾಸ್ ಪುನಾರಂಭದ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಜೂನ್ ತಿಂಗಳು ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ ಎಂದು ಪರಮೇಶ್ವರ್ ಗುಂಡ್ಕಲ್ ಬರೆದುಕೊಂಡಿದ್ದಾರೆ.

ಸ್ಪರ್ಧಿಗಳಾದ ಕೆ.ಪಿ. ಅರವಿಂದ್, ಶಮಂತ್ ಗೌಡ, ಮಂಜು ಪಾವಗಡ, ದಿವ್ಯಾ ಸುರೇಶ್, ರಘು ಗೌಡ, ವೈಷ್ಣವಿ ಗೌಡ, ಶುಭಾ ಪೂಂಜಾ, ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಮತ್ತೆ ದೊಡ್ಮನೆಯ ಕದ ತಟ್ಟಿದ್ದಾರೆ ಎನ್ನಲಾಗಿದೆ.
ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತಗೊಳ್ಳುವ ವೇಳೆಯಲ್ಲಿ ಆಸ್ಪತ್ರೆ ಸೇರಿದ್ದ ದಿವ್ಯಾ ಉರುಡುಗ ಕೂಡ ಈ ತಂಡವನ್ನ ಸೇರಿದ್ದಾರೆ ಎಂಬ ಮಾಹಿತಿ ಕೂಡ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Related