ಡಿಕೆಶಿಗೆ ಬಿಗ್ ಶಾಕ್!

ಡಿಕೆಶಿಗೆ ಬಿಗ್ ಶಾಕ್!

ಬೆಂಗಳೂರು: ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ತನಿಖೆ ನಡೆಸಲು ಆದೇಶ ಹೊರಡಿಸಿದೆ.

ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಕ್ರಮ ಆಸ್ತಿ ಗಳಿಕೆ ಸಂಬಂಧ ಹಲವಾರು ಬಾರಿ ಕೋರ್ಟು ಮೆಟ್ಟಿಲು ಏರಿದ್ದಾರೆ. ಮತ್ತೆ ಇದೀಗ ಕೋರ್ಟು ಮೆಟ್ಟಿಲೇರಲು ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಲೋಕಾಯುಕ್ತ ಡಿಜಿಪಿಗೆ ಆದೇಶದ ಪತ್ರವನ್ನು ರಾಜ್ಯ ಸರ್ಕಾರ ರವಾನಿಸಿದೆ. ಈಗಾಗಲೇ ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಸರ್ಕಾರದ ಪೂರ್ವಾನುಮತಿ ವಾಪಸ್ಸು ಬಳಿಕ ಲೋಕಾಯುಕ್ತಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಡಿಸೆಂಬರ್ 22 ನೇ ತಾರೀಖಿನ ದಿನಾಂಕದಲ್ಲಿ ಆದೇಶ ಹೊರಡಿಸಲಾಗಿದೆ. ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ರೂ ಲೋಕಾಯುಕ್ತ ಪೊಲೀಸರು ಇದುವರೆಗೂ ಎಫ್ಐಆರ್ (FIR) ದಾಖಲಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Related