ರಾಜ್ಯ ಸರ್ಕಾರದಿಂದ ವಿ ಸೋಮಣ್ಣಗೆ ಬಿಗ್ ಶಾಕ್

ರಾಜ್ಯ ಸರ್ಕಾರದಿಂದ ವಿ ಸೋಮಣ್ಣಗೆ ಬಿಗ್ ಶಾಕ್

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ಮತ್ತು ಜೆಡಿಎಸ್ ಒಂದಲ್ಲ ಒಂದು ರೀತಿಯ ಆರೋಪಗಳನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಮಾಡುತ್ತಿದೆ. ಇದೀಗ ಕಾಂಗ್ರೆಸ್‌ ಕೂಡಾ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡುತ್ತಿದೆ.

ಹೌದು, ಇತ್ತೀಚಿಗಷ್ಟೇ ಕೇಂದ್ರ ಸಚಿವರಾಗಿರುವಂತ ಎಚ್ ಡಿ ಕುಮಾರಸ್ವಾಮಿ ಅವರು ಜನತಾದರ್ಶನ ಮಾಡಿದ್ದರು. ಈ ಜನತಾದರ್ಶನಕ್ಕೆ ಯಾವುದೇ ಒಬ್ಬ ಸರ್ಕಾರಿ ಅಧಿಕಾರಿ ಕೂಡ ಹಾಜರಾಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸುತ್ತು. ಇದೀಗ ಕೇಂದ್ರ ರಾಜ್ಯ ಖಾಲೆ ಸಚಿವ ವಿ ಸೋಮಣ್ಣ ಅವರಿಗೆ ನೀಡಲಾಗಿದ್ದ ಕಚೇರಿಯನ್ನು ವಾಪಸ್ ಪಡೆದುಕೊಂಡಿದೆ.

ಯೆಸ್..ಹಳೇ ಪರಿವೀಕ್ಷಣಾ ಮಂದಿರದಲ್ಲಿ ಸೋಮಣ್ಣ ಅವರು ಕಚೇರಿ ಉಪಯೋಗಕ್ಕೆ ಪಡೆದುಕೊಂಡಿದ್ದರು. ಆದ್ರೆ, ಇದೀಗ ಅದು ಉದ್ಘಾಟನೆಗೆ ಸಿದ್ಧವಿರುವಾಗಲೇ ರಾಜ್ಯ ಸರ್ಕಾರ ಕಚೇರಿಯನ್ನು ವಾಪಸ್ ಪಡೆದುಕೊಂಡಿದೆ. ಇದನ್ನೂ ಓದಿ: ನಟ ದೊಡ್ಡಣ್ಣ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ!

ತುಮಕೂರಿನ ರೈಲ್ವೆ ನಿಲ್ದಾಣ ಬಳಿಯಿರುವ ಹಳೇ ಐಬಿಯನ್ನ ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನೀಡಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೂತನ ಕಚೇರಿ ಎಂದು ಫರ್ನಿಚರ್ಸ್, ವುಡ್ ವರ್ಕ್ ಹಾಗೂ ಟೇಬಲ್ ಚೇರಗಳನ್ನ ಹಾಕಿಸಿದ್ದರು. ಅಲ್ಲದೇ ನಾಡಿದ್ದು ಅಂದರೆ 18-8-24ರ ಭಾನುವಾರದಂದು ಕಚೇರಿ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿತ್ತು. ಆದ್ರೆ, ಕಚೇರಿ ಉದ್ಘಾಟನೆಗೆ 2 ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಸೋಮಣ್ಣಗೆ ಬಗ್ ಶಾಕ್ ಕೊಟ್ಟಿದೆ.

 

Related