ಎತ್ತಿನಗಾಡಿಗೆ ಬೈಕ್ ಡಿಕ್ಕಿ : ನವದಂಪತಿ ಸಾವು

ಎತ್ತಿನಗಾಡಿಗೆ ಬೈಕ್ ಡಿಕ್ಕಿ : ನವದಂಪತಿ ಸಾವು

ಕೊಟ್ಟೂರು : ತಾಲೂಕಿನ ಬೆನಕನಹಳ್ಳಿ ಬಳಿ ಎತ್ತಿನ ಬಂಡಿಗೆ ಬೈಕ್ ಡಿಕ್ಕಿಯಾಗಿ ದಂಪತಿ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ 6ಗಂಟೆಗೆ ಸಂಭವಿಸಿದೆ.

ನಿವೇದಿತಾ(23), ಶಿವಕುಮಾರ್(34) ಮೃತಪಟ್ಟಿದ್ದಾರೆ, ಜಗಳೂರು ತಾಲೂಕಿನ ಹೊಸಕೆರೆಯಿಂದ- ಸಂಡೂರಿಗೆ ಹೋಗುವ ಮಾರ್ಗ ಮಧ್ಯೆ ಅಪಘಾತವಾಗಿದೆ.

ಜಗಳೂರು ತಾಲೂಕಿನ ಹೊಸಕೆರೆಯಿಂದ ಶಿವಕುಮಾರ್ ಅವರ, ಸ್ವಗ್ರಾಮ ಸಂಡೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.
ದಂಪತಿ  ಹೊರಟ್ಟಿದ್ದ  ದ್ವಿಚಕ್ರ  ವಾಹನವು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿಯ ಮುಂಭಾಗದ ಕಬ್ಬಿಣದ ಸಲಕೆ ಮೋಕು ಇಬ್ಬರಿಗೂ ಎದೆಗೆ ಹೊಕ್ಕಿದೆ. ತೀವ್ರವಾಗಿ ಗಾಯಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related