ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಭಿಷೇಕ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭಾಶಯಗಳು ಕೋರಿದ್ದಾರೆ.
ಇನ್ನು ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಅಭಿಮಾನಿಗಳು ತಮ್ಮ ನೆಚ್ಚನ ನಟನ ಜನ್ಮದಿನಕ್ಕೆ ಶುಭಾಷಯಗಳನ್ನು ಕೋರಲು ಅವರ ಮನೆಯ ಸಮೀಪ ನೆರೆದಿದ್ದರು. ನಟ ಅಭಿಷೇಕ್ ಇಂದು ಬೆಳಗ್ಗೆ ಕೂಡ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.
ಈ ವರ್ಷ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದಲೇ ಅವರು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಕುರಿತು ಪೋಸ್ಟ್ ಕೂಡ ಹಾಕಿದ್ದರು. ಅಲ್ಲದೆ, ಮನೆ ಬಾಗಿಲಿಗೆ ಅಭಿಮಾನಿಗಳು ಬಂದರೆ ಅವರನ್ನು ಹಾಗೆಯೇ ಕಳುಹಿಸುವುದಿಲ್ಲ ಎಂದು ಕೂಡ ಅವರು ಹೇಳಿದ್ದರು. ಈಗ ಹಾಗೆಯೇ ಮಾಡಿದ್ದಾರೆ.