ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ

ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಾಲ್ಕಾರು ವರ್ಷಗಳಿಂದ ಗ್ಯಾರಂಟಿ ಗ್ಯಾರಂಟಿ ಎಂದು ಹಲವಾರು ರಾಜ್ಯಗಳ ಚುನಾವಣೆಗಳಲ್ಲಿ ಹೇಳುತ್ತಾ ಬಂದಿದ್ದಾರೆ.

ಆದರೆ ಅವರ ಗ್ಯಾರಂಟಿ ಮಾತಿಗೆ ಗ್ಯಾರಂಟಿನೇ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಶ್ರೀಧ ರೆಡ್ಡಿ ಅವರು ಹೇಳಿದರು. ಇಂದು (ಗುರುವಾರ) ಬಿಟಿಎಂ ವಿಧಾನಸಭಾ ಕ್ಷೇತ್ರದ ಲಕ್ಷಂದ್ರ ವಾರ್ಡ್ನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.

ಕಳೆದ ಬಾರಿ ರಾಜಸ್ಥಾನ್, ಛತ್ತೀಸ್ಘಡ್ ಹಾಗೂ ಇನ್ನಿತರ ರಾಜ್ಯಗಳಲ್ಲಿ ಇದೇ ರೀತಿ ಗ್ಯಾರಂಟಿ ಎಂದು ಗ್ಯಾರೆಂಟಿ ನೀಡಿದ ಕಾಂಗ್ರೆಸ್ ಪಕ್ಷ ತನ್ನ ಗ್ಯಾರಂಟಿಯನ್ನು ಕಳೆದುಕೊಂಡಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷ ಯಾವುದೇ ಒಂದು ಕೆಲಸವನ್ನು ಮಾಡಿಲ್ಲವೆಂದು ಗುಡುಗಿದರು.

ಅದೇ ರೀತಿ ಕಾಂಗ್ರೆಸ್ ಪಕ್ಷವು ಈ ಬಾರಿಯೂ ಕರ್ನಾಟಕದಲ್ಲಿ 2023 ನೆಯ ವಿಧಾನಸಭಾ ಚುನಾವಣೆಯಲ್ಲೂ ಸಹ ಇದೇ ಗ್ಯಾರಂಟಿ ಎಂಬ ಮಾತನ್ನು ನುಡಿಯುತ್ತಿದ್ದಾರೆ. ಆದರೆ ಯಾವುದೇ ಕೆಲಸಕ್ಕೆ ಗ್ಯಾರಂಟಿ ಸಿಕ್ಕಿಲ್ಲವೆಂದು ಕಾಂಗ್ರೆಸ್ ವಿರುದ್ಧ ಬಿಟಿಎಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರು ಟೀಕೆ ಮಾಡಿದರು.

ಕರ್ನಾಟಕದಲ್ಲಿ ಈ ಬಾರಿಯೂ ಡಬಲ್ ಇಂಜಿನ್ ಸರ್ಕಾರವೇ ಮುಂದುವರೆಯಲಿದೆ ಎಂದು ತಿಳಿಸಿದರು. ಬಿಟಿಎಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ತಮ್ಮ ಕ್ಷೇತ್ರದ ವಾರ್ಡ್ ಗಳಲ್ಲಿ ಮತ ಯೋಚನೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು

ಈ ಸಂದರ್ಭದಲ್ಲಿ ಕೇಂದ್ರ ಸಚಿವ, ರಾಜು ಚಂದ್ರಶೇಖರ್, ಎಂಎಲ್ಸಿ ಗೋಪಿನಾಥ್ ರೆಡ್ಡಿ, ಬಿಜೆಪಿ ಮುಖಂಡ ಜಯದೇವ್ ಹಾಗೂ ಆಡುಗೋಡಿಯ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಸರಳ ಮಹೇಶ್ ಗುರುಮೂರ್ತಿ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Related