ಆರ್.ಎಸ್.ಎಸ್ ತಂಟೆಗೆ ಬರಬೇಡಿ, ಹುಷಾರ್ : ಸಿದ್ದು ವಿರುದ್ದ ಈಶ್ವರಪ್ಪ ಸವಾಲ್

ಆರ್.ಎಸ್.ಎಸ್ ತಂಟೆಗೆ ಬರಬೇಡಿ, ಹುಷಾರ್ : ಸಿದ್ದು ವಿರುದ್ದ ಈಶ್ವರಪ್ಪ ಸವಾಲ್

ಬೆಂಗಳೂರು, ಜೂ 04 : ರಾವಣ ಹನುಮಂತನ ಬಾಲಕ್ಕೆ ಬೆಂಕಿ ಇಟ್ಟ ತಪ್ಪಿನಿಂದ ಇಡೀ ಲಂಕೆಯೇ ಸುಟ್ಟು ಹೋಯ್ತು. ನೀವು ಚಡ್ಡಿಗೆ ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. ಟ್ವಿಟ್ಟರ್ನಲ್ಲಿ ತೀವ್ರ ವಾಗ್ದಾಳಿ ನಡೆಸಿದ ಈಶ್ವರಪ್ಪ ಸಿದ್ದರಾಮಯ್ಯ ಅವರಿಗೆ ನಿಮ್ಮ ಬುಡವೇ ಸುಟ್ಟು ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಈಶ್ವರಪ್ಪ, ರಾವಣ ಬಾಲಕ್ಕೆ ಬೆಂಕಿ ಹಚ್ಚಿದ, ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ. ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ, ಚಡ್ಡಿಗೆ ನೀವು ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ಎಸ್ಎಸ್ ತಂಟೆಗೆ ಬರಬೇಡಿ, ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ.

Related