3 ವರ್ಷದ ನಂತರ ಬಿಜೆಪಿ ಕಾರ್ಯಕಾರಿಣಿ ಸಭೆ

3 ವರ್ಷದ ನಂತರ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರು : ಮೂರು ವರ್ಷದ ನಂತರ ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ನೂತನವಾಗಿ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಅರುಣ್ ಸಿಂಗ್ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಜವಾಬ್ದಾರಿ ನಿರ್ವಹಣೆ ಆರಂಭಿಸಲಿದ್ದಾರೆ.

ಡಿ. 5ರಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಘಟಕದ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಹ್ವಾನಿಸಿದ್ದಾರೆ. ಇದಕ್ಕೆ ಅರುಣ್ ಸಿಂಗ್ ಸಮ್ಮತಿ ನೀಡಿದ್ದು, ಕಾರ್ಯಕಾರಿಣಿ ಸಭೆಗೆ ಆಗಮಿಸುವ ಭರವಸೆ ನೀಡಿದ್ದಾರೆ.

ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ, ಬಸವ ಕಲ್ಯಾಣ, ಮಸ್ಕಿ ಅಭ್ಯರ್ಥಿಗಳ ಆಯ್ಕೆ, ಉಪ ಚುನಾವಣಾ ಸಿದ್ಧತೆ, ಸದ್ಯದಲ್ಲೇ ಎದುರಾಗಲಿರುವ ಗ್ರಾ.ಪಂ ಚುನಾವಣೆ ಕುರಿತು ಈ ಬಾರಿಯ ಕಾರ್ಯಕಾರಿಣಿ ಸಭೆ ವೇಳೆ ಚರ್ಚಿಸಲಾಗುತ್ತದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ನಾಯಕರು ಅರುಣ್ ಸಿಂಗ್‌ರನ್ನು ಸ್ವಾಗತ ಮಾಡಲಿದ್ದಾರೆ.

Related