ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ ಫೆ. 01) ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ನಿಂದಗಾಗಿ ದೇಶದಲ್ಲಿರುವ ಮಹಿಳೆಯರಿಗೂ ಹಾಗೂ ದಲಿತ ಸಮುದಾಯದ ಮಹಿಳೆಯರಿಗೂ ಸೇರಿದಂತೆ ಇನ್ನೂ ಹಲವು ಯೋಜನೆಗಳನ್ನು ಒಳಗೊಂಡಿದೆ. ಇನ್ನು ಕೃಷಿಗೆ ಸಂಬಂಧಿಸಿದಂತೆ ಹೆಚ್ಚು ಓತ್ತು ನೀಡಿರುವುದಾಗಿ ತಿಳಿದುಬಂದಿದ್ದು, ಇದರ ಬಗ್ಗೆ ಇದೀಗ ಸಾರಿಗೆ ಹಾಗೂ ಮುಜರಾಯಿ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಪ್ರತಿಕ್ರಿಯಿಸಿದ್ದು, ಕೇಂದ್ರ ಬಿಜೆಪಿ ಸರ್ಕಾರವು ನಮ್ಮನ್ನು ಸಾಲಗಾರನ್ನಾಗಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಮಹಿಳಾ ಉದ್ಯಮಿಗಳಿಗೆ ಬಂಪರ್ ಕೊಡುಗೆ
ನಗರದಲ್ಲಿಂದು ಕೇಂದ್ರ ಬಜೆಟ್ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಬಜೆಟ್ನಿಂದ ನಮಗೆ ಯಾವುದೇ ಲಾಭ ಇಲ್ಲ. 1947ರಿಂದ ಇಲ್ಲಿತನಕ 53 ಲಕ್ಷ ಕೋಟಿ ರೂ. ಸಾಲ ಇತ್ತು. ಈಗ 11 ವರ್ಷದಲ್ಲಿ 150 ಲಕ್ಷ ಕೋಟಿ ರೂ. ಹೆಚ್ಚುವರಿ ಸಾಲ ಆಗಿದೆ. ದೇಶದ ಸಾಲ ಈಗ 200 ಲಕ್ಷ ಕೋಟಿ ಆಗಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರ ನಮ್ಮನ್ನು ಸಾಲಗಾರರನ್ನಾಗಿ ಮಾಡಿದೆ. ಇವರಿಂದ ನಾವು ಏನೂ ನಿರೀಕ್ಷೆ ಮಾಡಲಾಗುವುದಿಲ್ಲ. ಸುಮ್ಮನೆ ಮಾಧ್ಯಮಗಳ ಮುಂದೆ ಹೇಳುತ್ತಾರೆ ಅಷ್ಟೇ. ಪ್ರಾಕ್ಟಿಕಲ್ ಆಗಿ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ. ಮೋದಿ ಅವರ ಆಡಳಿತದಲ್ಲಿ ಯಾವುದಾದರೂ ಬೆಲೆ ಕಡಿಮೆ ಇದೆಯಾ? ಜನರ ಆದಾಯ ಜಾಸ್ತಿ ಆಗಿದ್ಯಾ? ಖರ್ಚು ಮಾತ್ರ ಜಾಸ್ತಿ ಆಗಿದೆ ಎಂದಿದ್ದಾರೆ.