ಇಡೀ ದೇಶದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಬೇಕು: ಸಂತೋಷ್ ಲಾಡ್

ಇಡೀ ದೇಶದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಬೇಕು: ಸಂತೋಷ್ ಲಾಡ್

ಕಲಘಟಗಿ: ದೇಶದ ಜನತೆಗೆ ಸುಳ್ಳು ಆಶ್ವಾಸನೆ ನೀಡುತ್ತಿರುವ ಬಿಜೆಪಿ ಸರ್ಕಾರವನ್ನು ಜನತೆ ಈ ಬಾರಿ ಕಿತ್ತಿಸಬೇಕು. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಕಾರ್ಮಿಕರ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ.

ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿ ವಿನೋದ ಅಸೂಟಿ ಅವರ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರಚಾರಕ್ಕೆ ಹೋದಲ್ಲಿ ಪ್ರಹ್ಲಾದ ಜೋಶಿ ಸಾಹೆಬ್ರು ನಾನು ಮೋದಿ ಹಾಗೂ ಅವರನ್ನು ಬೈಯುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನು ಕೂಡಾ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ ಎಂದು ಹೇಳಿದರು.

2014ರ ಮೊದಲು ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಸ್ವೀಸ್ ಬ್ಯಾಂಕ್‌ನಿಂದ ಹಣ ತಂದು ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ, ಪ್ರತಿ ವರ್ಷ ಯುವಕರಿಗೆ 2 ಕೋಟಿ ಉದ್ಯೋಗ ನೀಡುತ್ತೇನೆ. ರೈತರ ಸಾಲ ಮನ್ನಾ ಹಾಗೂ ರೈತರ ಆದಾಯ ದ್ವಿಗುಣಗೊಳ್ಳಿಸುತ್ತೇನೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈ ವರೆಗೂ ಈಡೇರಿಸಿಲ್ಲ. ಅಧಿಕಾರಕ್ಕೆ ಬಂದ ನಂತರ ಪ್ರತಿ ವಸ್ತುಗಳ ಬೆಲೆ ಏರಿಕೆಯಾಗಿ ಬಡವರು, ಕೂಲಿಕಾರ್ಮಿಕರು ಬದುಕುವುದು ಕಷ್ಟವಾಗಿದೆ. 2016ರಲ್ಲಿ ನರೇಂದ್ರ ಮೋದಿ ಅವರು ಕಪ್ಪು ಹಣ ವೈಟ್ ಮಾಡುತ್ತೇನೆ ಎಂದು ರಾತ್ರೋರಾತ್ರಿ ನೋಟು ಬ್ಯಾನ್ ಮಾಡಿದಾಗ ಬಡವರು, ರೈತರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತು ನೋಟು ಬದಲಾವಣೆ ಮಾಡುವಾಗ ಎಷ್ಟು ಜನರು ಪ್ರಾಣ ಕಳೆದುಕೊಂಡರು.

ಆದರೆ, ಶ್ರೀಮಂತರು ಯಾರು ಕೂಡಾ ಬ್ಯಾಂಕ್ ಮುಂದೆ ನಿಂತು ಪ್ರಾಣ ಕಳೆದುಕೊಳ್ಳಲಿಲ್ಲ. ಈ ಕುರಿತು ಪ್ರಶ್ನಿಸಿದರೆ ನಾನು ಬೈಯುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

Related