ಸಿದ್ದರಾಮಯ್ಯ ರವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ : ಸಿಎಂ

ಸಿದ್ದರಾಮಯ್ಯ ರವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ : ಸಿಎಂ

ಬೆಂಗಳೂರು, ಜೂನ್ 06 : ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದರು ಅವರು ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡರೆ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ನಾವು ಈ ಬಗ್ಗೆ ಮುಕ್ತವಾಗಿದ್ದೇವೆ. ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಅದ್ಯಾವುದರ ಬಗ್ಗೆಯೇ ಆಗಲಿ ಸರಿಪಡಿಸಿ ಮರುಮುದ್ರಣ ಮಾಡಲಾಗುವುದು ಎಂದರು.

ಪೀರ್ ಪಾಷಾ ದರ್ಗಾ ಕುರಿತು ಸಂಶೋಧನೆ ಮಾಡಲುವಂತೆ ಸ್ವಾಮೀಜಿಗಳು ಮನವಿ ನೀಡಿದ್ದಾರೆ ಪುರಾತತ್ವ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.

Related