ಸಿಎಂ ರವರಿಂದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ” ಕಟ್ಟಡ ಉದ್ಘಾಟನಾ ಕಾರ್ಯಕ್ರಮ.

ಸಿಎಂ ರವರಿಂದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ” ಕಟ್ಟಡ ಉದ್ಘಾಟನಾ ಕಾರ್ಯಕ್ರಮ.

ನಗರದ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಾಗರಭಾವಿ ವಾರ್ಡ್ ಸಂಖ್ಯೆ 128ರ ಮಾನಸನಗರದಲ್ಲಿ ನೂತನವಾಗಿ ನಿರ್ಮಿಸಿರುವ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ” ಕಟ್ಟಡವನ್ನು ಇಂದು ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರು ಉದ್ಘಾಟಿಸಿದರು.

ಈ ವೇಳೆ ಮಾನ್ಯ ಸ್ಥಳೀಯ ಶಾಸಕರು, ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಶ್ರೀ ವಿ.ಸೋಮಣ್ಣ, ಮಾನ್ಯ ತೋಟಗಾರಿಕಾ ಸಚಿವರಾದ ಶ್ರೀ ಮುನಿರತ್ನ, ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀ ಪುಟ್ಟಣ್ಣ, ಶ್ರೀ ಅ. ದೇವೇಗೌಡ, ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related