ಮುಖ್ಯಮಂತ್ರಿ ರವರಿಂದ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೀಕ್ಷಣೆ..

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಜೆ.ಸಿ ನಗರ 60 ಅಡಿ ರಸ್ತೆಯ ಬಳಿ ಕಲ್ವರ್ಟ್, ಜೆ.ಸಿ ನಗರ 19ನೇ ಮುಖ್ಯ ರಸ್ತೆ, ನಾಗವಾರ ಮೆಟ್ರೋ ಸ್ಟೇಷನ್ ಕಾಮಗಾರಿ, ಹೆಚ್.ಬಿ.ಆರ್ ಲೇಔಟ್ ಮಳೆ ನೀರುಗಾಲುವೆಯಲ್ಲಿ ಹೂಳನ್ನು ತೆಗೆದಿರುವ, ಹೆಬ್ಬಾಳ ಎಸ್.ಟಿ.ಪಿ ಯನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರು ವೀಕ್ಷಣೆ ಮಾಡಿದರು.

ಈ ವೇಳೆ ಸಚಿವರಾದ ಶ್ರೀ ವಿ.ಸೋಮಣ್ಣ, ಶ್ರೀ ಕೆ.ಗೋಪಾಲಯ್ಯ, ಶ್ರೀ ಆರ್.ಅಶೋಕ್, ಬಿ.ಡಿ.ಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್, ಕೇಂದ್ರ ಸಚಿವರಾದ ಶ್ರೀ ರಾಜೀವ್ ಚಂದ್ರ ಶೇಖರ್, ಸಂಸದರಾದ ಶ್ರೀ ಪಿ.ಸಿ.ಮೋಹನ್, ಮಾನ್ಯ ಶಾಸಕರಾದ ಭೈರತಿ ಸುರೇಶ್, ಶ್ರೀ ಕೆ.ಜೆ.ಜಾರ್ಜ್, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಎನ್.ಮಂಜುನಾಥ್ ಪ್ರಸಾದ್, ಪಾಲಿಕೆಯ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೆಸ್, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಬಿಡಿಎ ಅಯುಕ್ತರಾದ ರಾಜೇಶ್ ಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Related