ಮಂಡ್ಯ, ಮೇ 16: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆದಿಚುಂಚನಗಿರಿ ಮಠದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ಆರೋಗ್ಯ ಹಾಗೂ ಶಿಕ್ಷಣಕ್ಕೆ ಒತ್ತು :
ಅನಾದಿಕಾಲದಿಂದ ಅರಮನೆಗೂ ಗುರುಮನೆಗೆ ಸಂಬಂಧವಿತ್ತು. ಗುರುಗಳಿಂದಲೂ, ಗ್ರಾಮದ ಕಟ್ಟಕಡೆಯ ಮನುಷ್ಯನಿಂದಲೂ ಕಲಿಕೆಯಿದೆ. ಆಧ್ಯಾತ್ಮಿಕತೆ ಹಾಗೂ ಸ್ಥಳೀಯ ಜ್ಞಾನದಿಂದ ರಾಜ್ಯವನ್ನು ಸುಭಿಕ್ಷವಾಗಿ, ಸಂಪತ್ಭರಿತವಾಗಿ ಮಾಡಲು ಸಾಧ್ಯವಿದ್ದು, ಇದು ಸರ್ಕಾರದ ಧ್ಯೇಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಉತ್ತಮ ಸಚಿವರ ತಂಡ ನನ್ನೊಂದಿಗಿದೆ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರ ಹೆಚ್ಚಿನ ಒತ್ತು ನೀಡಲಾಗಿದ್ದು, ಹೆಚ್ಚಿನ ಅನುದಾನವನ್ನು ನೀಡಲಾಗಿದೆ. 7000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ವಲಯಾವಾರು ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ, ಒಳ್ಳೆಯ ಆಡಳಿತ ನಮ್ಮ ಗುರಿಯಾಗಿದೆ ಎಂದರು.
ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಡಾ: ಕೆ.ಸುಧಾಕರ್, ಕೆ.ಗೋಪಾಲಯ್ಯ, ನಾರಾಯನ ಗೌಡ, ಶಾಸಕ ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.