ನಾಯಕರನ್ನ ನಾಯಕರ ಸ್ಥಾನದಲ್ಲೇ ನೋಡುತ್ತೇವೆ, ದೇವರ ಸ್ಥಾನದಲ್ಲಿ ಅಲ್ಲ : ಸಿ.ಟಿ ರವಿ

ನಾಯಕರನ್ನ ನಾಯಕರ ಸ್ಥಾನದಲ್ಲೇ ನೋಡುತ್ತೇವೆ, ದೇವರ ಸ್ಥಾನದಲ್ಲಿ ಅಲ್ಲ : ಸಿ.ಟಿ ರವಿ

ಚಿಕ್ಕಮಗಳೂರು:  ರಾಜಕೀಯದಲ್ಲಿ ಯಾರೂ ಗಂಭೀರವಾಗಿ ತೆಗೆದುಕೊಳ್ಳಲ್ಲ. ಯಾವ ಪಾತ್ರಕ್ಕೆ ಬೇಕಾದರೂ ಸೂಕ್ತವಾಗುವ ವ್ಯಕ್ತಿ ಎಂದು ಜೆಡಿಎಸ್​ ಮುಖಂಡ ಸಿ.ಎಂ ಇಬ್ರಾಹಿಂ ವಿರುದ್ಧ ಬಿಜೆಪಿ ರಾಜಕೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿ.ಎಂ ಇಬ್ರಾಹಿಂ ಕಾಂಗ್ರೆಸ್​ಗೆ ಬಂದಾಗ ದೇವೇಗೌಡರ ಬಗ್ಗೆ ಮಾತನಾಡಿದ್ದ ಹಳೇ ಕ್ಯಾಸೆಟ್ ಹಾಕಿ ನೋಡಿ. ಆಗ ಇಬ್ರಾಹಿಂಗೆ ದೇವೇಗೌಡರ ಮೇಲಿರುವ ಪ್ರಾಮಾಣಿಕ ಭಾವನೆ ಏನೆಂದು ವ್ಯಕ್ತವಾಗುತ್ತದೆ. ನಮಗೆ ಭಾರತ ಮಾತೆಯೇ ದೇವರು, ಎಲ್ಲಾ ದೇವರಿಗಿಂತ ಭಾರತಮಾತೆಯೇ ದೊಡ್ಡವಳು.ಅಟಲ್ ಜೀ, ಮೋದಿ, ಅಡ್ವಾಣಿ, ಅಮಿತ್ ಶಾ ನಮ್ಮ ನಾಯಕರು. ನಾಯಕರನ್ನ ನಾಯಕರ ಸ್ಥಾನದಲ್ಲೇ ನೋಡುತ್ತೇವೆ, ದೇವರ ಸ್ಥಾನದಲ್ಲಿ ಅಲ್ಲ ಎಂದರು.

ಇನ್ನು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದ ಜನರೇ ಕಾಂಗ್ರೆಸ್​ ಅನ್ನು ಟಾರ್ಗೆಟ್ ಮಾಡಿದ್ದಾರೆ, ಡಿ.ಕೆ ಶಿವಕುಮಾರ್​ ಅವರನ್ನು ಟಾರ್ಗೆಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಅವರು ತಮ್ಮನ್ನ ತಾವು ವೈಭವೀಕರಿಸಿಕೊಳ್ಳಬಹುದು. ಆದರೆ ಅವರ ರಾಜಕೀಯ ಸಾಮರ್ಥ್ಯ ಸಾಬೀತು ಮಾಡಿರುವುದು ಕನಕಪುರದಲ್ಲಷ್ಟೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ ಹಾಗೇ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಅವರು ಏನೂ ತಪ್ಪು ಮಾಡಿಲ್ಲವಾದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

Related