ಬರ ಪರಿಹಾರ ವಿಚಾರದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ

ಬರ ಪರಿಹಾರ ವಿಚಾರದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ

ಮೈಸೂರು: ಕರ್ನಾಟಕ ರಾಜ್ಯದ ಬರಗಾಲದ ಕುರಿತು ನಾನು ಡಿಸೆಂಬರ್ ತಿಂಗಳಲ್ಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ. ಇದೇನಾದರೂ ಸುಳ್ಳಾಗಿದ್ದರೆ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕಾಮಗಾರಿಗಳಿಗೆ ಅನುದಾನ ನೀಡುತ್ತಿರುವ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಅ. 3 ರಂದೇ ವರದಿ ಕೊಟ್ಟಿದ್ದೇವೆ. ಆನಂತರ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದೆ. ಡಿ. 19 ರಂದು ಪ್ರಧಾನಿ ಹಾಗೂ ಡಿ. 20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಿದ್ದೆವು. ಈ ಪ್ರಕ್ರಿಯೆಯನ್ನು 9 ತಿಂಗಳ ಹಿಂದೆಯೇ ಪೂರ್ಣಗೊಳಿಸಿ ಪರಿಹಾರಕ್ಕೆ ಮನವಿ ಮಾಡಿದ್ದೆವು.

ಆದರೆ ಈ ವಿಚಾರದಲ್ಲಿ ದೇಶದ ಗೃಹಮಂತ್ರಿಯಾಗಿರುವ ಅಮಿತ್ ಶಾ ಅವರು ಸುಳ್ಳು ಹೇಳುತ್ತಿದ್ದಾರೆ. ಸತ್ಯ ತಲೆ ಮೇಲೆ ಹೊಡೆದ ರೀತಿಯಲ್ಲಿ ಸುಳ್ಳು ಹೇಳುತ್ತಿದ್ದಾರೆ. ನಾನೇಕೆ ಸುಳ್ಳು ಹೇಳಲಿ ಎಂದು ತಿರುಗೇಟು ನೀಡಿದರು.

 

Related