ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಯನ್ನು ಆಯ್ಕೆ ಮಾಡಿ: ಸತೀಶ್ ರೆಡ್ಡಿ

ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಯನ್ನು ಆಯ್ಕೆ ಮಾಡಿ: ಸತೀಶ್ ರೆಡ್ಡಿ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ಇಂದು (ಭಾನುವಾರ ಏಪ್ರಿಲ್ 21) ರಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಂಗಮ್ಮನ ಪಾಳ್ಯದಲ್ಲಿ ಬಿಜೆಪಿ ಮುಖಂಡರುಗಳಾದ ಶ್ರೀನಿವಾಸ ಗೌಡ ಹಾಗೂ ನಾಗೇಂದ್ರ ಗೌಡ ಅವರ ನೇತೃತ್ವದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ತೇಜಸ್ವಿ ಸೂರ್ಯ ಅವರಿಗೆ ಮತ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಬೃಹತ್ ರ್ಯಾಲಿಯ ಮಾಡುವ ಮೂಲಕ ಮಂಗಮ್ಮನ ಪಾಳ್ಯ ಸುತ್ತಮುತ್ತಲಿನಲ್ಲಿ ಭರ್ಜರಿ ಮತಯಾಚನೆ ಮಾಡಿದರು.
ಇನ್ನು ಇದೇ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಮಾತನಾಡಿ, ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಯನ್ನು ಆಯ್ಕೆ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು. ಇನ್ನಷ್ಟು ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಬೇಕು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 5 ವರ್ಷದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ನೀವು ಮತ್ತೊಮ್ಮೆ ತೇಜಸ್ವಿ ಸೂರ್ಯ ಅವರಿಗೆ ಮತ ನೀಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿವಿಧ ಬಿಜೆಪಿ ಮುಖಂಡರಾದ ಸೈಯದ್ ಸಲಾಂ, ತ್ಯಾಗರಾಜು ಇನ್ನಿತರ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Related